ಕನ್ನಡದ ಹಿರಿಯ ಪರ್ತಕರ್ತ ಟಿ.ಎಸ್. ರಾಮಚಂದ್ರರಾವ್ ಅವರ ನೆನಪಿನಲ್ಲಿ ಸರ್ಕಾರ ಟಿಯೆಸ್ಸಾರ್ ನಿಡುತ್ತಾ ಬಂದಿದೆ. ಪ್ರಶಸ್ತಿಯ ಮೊತ್ತ ರೂ. 2 ಲಕ್ಷ ಆಗಿದ್ದು, ಕನ್ನಡ ಪತ್ರಿಕೋದ್ಯಮ, ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮದಲ್ಲಿ ಅಥವಾ ಎರಡರಲ್ಲೂ ಒಟ್ಟಿಗೆ ಕನಿಷ್ಠ 30 ವರ್ಷಗಳ ಸೇವೆ ಸಲ್ಲಿಸಿರಬೇಕು. ಜೊತೆಗೆ ಕನ್ನಡ ಕ್ಷೇತ್ರಕ್ಕೆ ಭಾಷೆಯ ಬೆಳವಣಿಗೆಗೆ ವಿಶೇಷ ಕೊಡುಗೆ ನೀಡಿರುವವರನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದು. ಪ್ರತಿ ಕ್ಯಾಲೆಂಡರ್ ವರ್ಷಕ್ಕೆ ಒಬ್ಬರಿಗೆ ಮಾತ್ರ ಈ ಪ್ರಶಸ್ತಿಯನ್ನು ನೀಡಲಾಗುವುದು.
![ಟಿಯೆಸ್ಸಾರ್ ಸ್ಮಾರಕ ಪತ್ರಿಕೋದ್ಯಮ ಪ್ರಶಸ್ತಿ ಟಿಯೆಸ್ಸಾರ್ ಸ್ಮಾರಕ ಪತ್ರಿಕೋದ್ಯಮ ಪ್ರಶಸ್ತಿ](https://pingara.com/themes/pingaranews/assets/images/Pingara.com Logo.png)