ಉಡುಪಿ:  ಮೂಡುಬೆಳ್ಳೆಯ ಸೈಂಟ್ ಲಾರೆನ್ಸ್ ಕನ್ನಡ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಹೃದಯಾಘಾತದಿಂದ ಜು.3ರಂದು ನಿಧನರಾಗಿದ್ದಾರೆ. ಮೃತರನ್ನು ಭಾಗ್ಯಶ್ರೀ (16) ಎಂದು ಗುರುತಿಸಲಾಗಿದೆ.

ಬೆಳಗ್ಗೆ ಮನೆಯಲ್ಲಿ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಭಾಗ್ಯಶ್ರೀ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದುರದೃಷ್ಟವಶಾತ್ ಚಿಕಿತ್ಸೆ ಪಡೆಯುವ ಮುನ್ನವೇ ಆಕೆ ಕೊನೆಯುಸಿರೆಳೆದಿದ್ದಾಳೆ. ಆಕೆಗೆ ಮೊದಲೇ ಹೃದಯ ಸಂಬಂಧಿ ಕಾಯಿಲೆ ಇತ್ತು ಎಂದು ತಿಳಿದುಬಂದಿದೆ.

ಅವರು ತಮ್ಮ ತಂದೆ ಜಯರಾಮ ಆಚಾರ್ಯ ಮತ್ತು ತಾಯಿ ಚಂದ್ರಿಕಾ ಅವರನ್ನು ಅಗಲಿದ್ದಾರೆ

ಭಾಗ್ಯಶ್ರೀ ಅವರ ನಿಧನಕ್ಕೆ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ವಿದ್ಯಾರ್ಥಿ ಸಮೂಹ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಆಕೆಯ ಗೌರವಾರ್ಥವಾಗಿ ಜುಲೈ 3 ರಂದು ಶಾಲೆಗೆ ರಜೆ ನೀಡಲಾಗಿತ್ತು.