ಉಡುಪಿ, ಡಿ. 12:  ಕರ್ನಾಟಕ ರಾಜ್ಯ ಗಸ್ತು ಅರಣ್ಯ ಪಾಲಕರ ಮತ್ತು ಅರಣ್ಯ ವೀಕ್ಷಕರ ಸಂಘ ಕುಂದಾಪುರ ಪ್ರಾದೇಶಿಕ ಹಾಗೂ ಕುದುರೆಮುಖ ವನ್ಯಜೀವಿ ವಿಭಾಗ ಉಡುಪಿ ಇವರ ವತಿಯಿಂದ ಹೊಸ ವರ್ಷದ ಡೈರಿ ಬಿಡುಗಡೆ ಹಾಗೂ ನಿವೃತ್ತ ಅರಣ್ಯ ಪಾಲಕರು ಮತ್ತು ಅರಣ್ಯ ವೀಕ್ಷಕರು, ಸಾರ್ವಜನಿಕ ಸೇವೆ ಸಲ್ಲಿಸಿದವರಿಗೆ ಸನ್ಮಾನ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭವು ಡಿಸೆಂಬರ್ 14 ರಂದು ಬೆಳಗ್ಗೆ 10.30 ಕ್ಕೆ ನಗರದ ಕಿದಿಯೂರು ಹೋಟೆಲ್‍ನ ಶೇಷಶಯನ ಹಾಲ್‍ನಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಮಂಗಳೂರು ವೃತ್ತ ಅರಣ್ಯ ಸಂರಕ್ಷಣಾಧಿಕಾರಿ ಡಾ. ಕರಿಕಾಲನ್ ವಿ ಉದ್ಘಾಟಿಸಲಿದ್ದು, ಕರ್ನಾಟಕ ರಾಜ್ಯ ಗಸ್ತು ಅರಣ್ಯ ಪಾಲಕರ ಮತ್ತು ಅರಣ್ಯ ವೀಕ್ಷಕರ ಸಂಘ ಕುಂದಾಪುರ ಪ್ರಾದೇಶಿಕ ಹಾಗೂ ಕುದುರೆಮುಖ ವನ್ಯಜೀವಿ ವಿಭಾಗದ ಅಧ್ಯಕ್ಷ ಕೇಶವ ಪೂಜಾರಿ ಎಂ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಮಂಗಳೂರಿನ ಕರ್ನಾಟಕ ಗೇರು ಅರಣ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಕೆ.ಕಮಲ, ಕುಂದಾಪುರ ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಗಣಪತಿ ಕೆ, ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿವರಾಮ್ ಬಾಬು ಎಂ, ವಿಭಾಗೀಯ ವ್ಯವಸ್ಥಾಪಕ ಉದಯ ಕುಮಾರ್ ಜೋಗಿ, ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರ ಕುಮಾರ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಸತೀಶ್ ಎನ್, ಪ್ರಕಾಶ್ ಪೂಜಾರಿ, ಪಿ.ಶ್ರೀಧರ್ ಹಾಗೂ ಜಿ.ಡಿ ದಿನೇಶ್, ಉಡುಪಿ ವಲಯ ಅರಣ್ಯಾಧಿಕಾರಿ ವಾರಿಜಾಕ್ಷಿ, ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಕೆ. ದಿನಕರ ಶೆಟ್ಟಿ ಅಂಪಾರು, ಕರ್ನಾಟಕ ರಾಜ್ಯ ಗಸ್ತು ಅರಣ್ಯ ಪಾಲಕರ ಮತ್ತು ಅರಣ್ಯ ವೀಕ್ಷಕರ ಸಂಘ ಕುಂದಾಪುರ ಪ್ರಾದೇಶಿಕ ಹಾಗೂ ಕುದುರೆಮುಖ ವನ್ಯಜೀವಿ ವಿಭಾಗದ ಗೌರವಾಧ್ಯಕ್ಷ ಎಚ್ ದೇವರಾಜ ಪಾಣ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.