ಉಡುಪಿ, ಅ 18:  ಹೆಬ್ರಿ ತಾಲೂಕು ಕುಚ್ಚೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೇಳಂಜೆ ಗ್ರಾಮದ ಹೆಬ್ರಿ-ಬೇಳಂಜೆ-ಅಲ್ಬಾಡಿ ರಾಜ್ಯ ರಸ್ತೆಯ ಎರಡು ಬದಿಯಲ್ಲಿರುವ ರಸ್ತೆ ಬದಿಗೆ ಬಾಗಿಕೊಂಡ ಒಟ್ಟು 83 ಅಪಾಯಕಾರಿ ಮರಗಳನ್ನು ತೆರವುಗೊಳಿಸುವ ಹಿನ್ನೆಲೆ, ಅಕ್ಟೋಬರ್ 19 ರಂದು ಮಧ್ಯಾಹ್ನ 3 ಗಂಟೆಗೆ ಹೆಬ್ರಿ ವಲಯ ಅರಣ್ಯಾಧಿಕಾರಿಗಳ ಕಚೇರಿಯಲ್ಲಿ ನಿಗಧಿಪಡಿಸಲಾಗಿದ್ದ ಸಾರ್ವಜನಿಕ ಅಹವಾಲು ಸಭೆಯನ್ನು ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆ, ಚುನಾವಣಾ ನೀತಿ ಸಂಹಿತೆ ಜಾರಿಯಲಿರುವುದರಿಂದ ರದ್ದುಪಡಿಸಲಾಗಿದ್ದು, ಮುಂದಿನ ದಿನಾಂಕವನ್ನು ಪತ್ರಿಕಾ ಪ್ರಕಟನೆಯ ಮೂಲಕ ತಿಳಿಸಲಾಗುವುದು ಎಂದು ಮೂಡಬಿದ್ರೆ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.