ಉಡುಪಿ: ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಡಾ. ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ ಬಾಲಕಿಯರ ಸರಕಾರಿ ಪದವಿ ಪೂರ್ವಕಾಲೇಜು, ಉಡುಪಿ  ಇವರ ಸಹಯೋಗದಲ್ಲಿ ಅರಿವಿನ ಬೆ¼ಕು ಉಪನ್ಯಾಸ ಮಾಲೆ -10 ಕಾರ್ಯಕ್ರಮವು ಸೆಪ್ಟಂಬರ್ 25 ರಂದು ಮಧ್ಯಾಹ್ನ 3.00 ಕ್ಕೆ ನಗರದ ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲ ಜಗದೀಶ್‍ಕುಮಾರ್‍ ಉದ್ಘಾಟಿಸಲಿದ್ದು, ಡಾ. ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ. ಗಣನಾಥ ಶೆಟ್ಟಿ ಎಕ್ಕಾರು ಅಧ್ಯಕ್ಷತೆ ವಹಿಸಲಿದ್ದಾರೆ. ಸಾಹಿತಿ ಹಾಗೂ ಮಹಿಳಾ ಚಿಂತಕಿ ವಸಂತಿ ಶೆಟ್ಟಿ ಬ್ರಹ್ಮಾವರ ಸಂಪನ್ಮೂಲ ವ್ಯಕ್ತಿಯಾಗಿ  ಭಾಗವಹಿಸಿ “ಕಾರಂತರ ಬದುಕು ಬರಹಗಳು ವಿದ್ಯಾರ್ಥಿಗಳಿಗೆ ಪ್ರೇರಣಾ ಶಕ್ತಿ” ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದು ಡಾ. ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಕಾರ್ಯದರ್ಶಿಗಳ ಪ್ರಕಟಣೆ ತಿಳಿಸಿದೆ.