ಉಜಿರೆ, ಜೂ 25:  ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆ ಅವರ ಆಪ್ತ ಕಾರ್ಯದರ್ಶಿ ಎ. ವಿ ಶೆಟ್ಟಿ ಅವರು ಜೂ.25 ರಂದು 2024-25ರ ಶೈಕ್ಷಣಿಕ ವರ್ಷದ ಶಾಲಾ ಸಂಘಗಳನ್ನು ಉದ್ಘಾಟಿಸಿದರು.

ಬಳಿಕ ಅವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ಕಲಿಕೆಯು ಕಲ್ಪನೆಯೊಂದಿಗೆ ಸಾಗಬೇಕು ಹಾಗೂ ಶಿಕ್ಷಣದ ಜತೆಗೆ ವಿದ್ಯಾರ್ಥಿಗಳು ಇತರ ಪೂರಕ ಚಟುವಟಿಕೆಗಳ ಮೂಲಕ ಜ್ಞಾನ ಗಳಿಸಬೇಕು ಹಾಗೂ ಧರ್ಮಸ್ಥಳದ ಸಮಾಜಮುಖಿ ಕಾರ್ಯಗಳಿಂದ ನಾವು ಉತ್ತಮ ಮೌಲ್ಯಗಳನ್ನು ಕಲಿಯಲು ಸಾಧ್ಯ ಎಂದು  ಎಂದು ಹೇಳಿದರು.

ಶಾಲೆಯ ವಿವಿಧ ಸಂಘಗಳಾದ ಸಾಂಸ್ಕೃತಿಕ ಸಂಘ, ಭಿತ್ತಿ ಪತ್ರಿಕೆ ಸಂಘ, ಕಲಾ ಸಂಘ, ಹವ್ಯಾಸ ಸಂಘ, ಕ್ರೀಡಾ ಸಂಘ, ಇಂಟೆರಾಕ್ಟ್ ಸಂಘ, ಪರಿಸರ ಸಂಘ, ಕನ್ನಡ ಸಂಘ, ವಿಜ್ಞಾನ ಸಂಘ, ಸಾಹಿತ್ಯ ಸಂಘ, ಗಣಿತ ಸಂಘ ಇವುಗಳ ಉದ್ಘಾಟನೆಯು ವಿಶಿಷ್ಟ ರೀತಿಯಿಂದ ನಡೆಯಿತು.

ಶಾಲಾ ಮುಖ್ಯೋಪಾಧ್ಯಾಯ ಮಮ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಆಯಾ ಸಂಘಗಳ ಸಂಯೋಜಕ ಶಿಕ್ಷಕರು ತಮ್ಮ ಸಂಘದ ವಿದ್ಯಾರ್ಥಿಗಳೊಂದಿಗೆ ಕಾರ್ಯಕ್ರಮ ಆಯೋಜಿಸಿದರು.

ವಿದ್ಯಾರ್ಥಿಗಳಾದ ಚಿಂತನ್ ಮತ್ತು ಆನೆಟ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿ, ವಿದ್ಯಾರ್ಥಿ ಶಶಾಂಕ್ ಪ್ರಭು ವಂದಿಸಿದರು.