ಮಂಗಳೂರು, ಮೇ 12:- ಗ್ರಾಮ ಮಟ್ಟದಕಾರ್ಯಪಡೆಯ ಸಕ್ರೀಯವಾಗಿ ಒಂದೇ ಕುಟುಂಬದ ಸದಸ್ಯರಂತೆ ಕೊರೋನಾ ನಿಯಂತ್ರಣ ಕಾರ್ಯವನ್ನು ಜಿಲ್ಲೆಯಲ್ಲಿ ಮಾಡುವುದರೊಂದಿಗೆ ಕೊರೋನಾ ಮುಕ್ತವನ್ನಾಗಿಸಿ ರಾಜ್ಯದಲ್ಲಿಯೇ ಮಾದರಿಯಾಗಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ಅವರು ಇಂದು ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ವಿಡಿಯೋ ಕಾನ್ಪರೆನ್ಸ್ ಮೂಲಕ ಪುತ್ತೂರು, ಕಡಬ, ಮಂಗಳೂರು, ಮೂಡಬಿದ್ರೆ ಮತ್ತು ಬಂಟ್ವಾಳದ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಅಭಿವೃದ್ಧಿ ಅಧಿಕಾರಿಗಳು ಸೇರಿದ ಗ್ರಾಮ ಮಟ್ಟದ ಟಾಸ್ಕ್ ಪೋರ್ಸ್ ಸಮಿತಿ ಸದಸ್ಯರೊಂದಿಗೆ ಕೋವಿಡ್-19 ನಿಯಂತ್ರಣಕುರಿತ ಸಂವಾದ ಸಭೆಯಲ್ಲಿ ಮಾತನಾಡಿದರು.
ರಾಜ್ಯಾದ್ಯಂತ ಕೊರೋನಾ ಕಪ್ರ್ಯೂ ಜಾರಿಯ ಕಾರಣ ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಲ್ಲಿ ಉದ್ಯೋಗ ಅರಸಿ ಹೋಗಿರುವವರುತಮ್ಮ ಸ್ವಂತ ಊರುಗಳಿಗೆ ಹಿಂದಿರುಗುತ್ತಿದ್ದಾರೆ. ಅಂತವರುಗಳ ಆರೋಗ್ಯಕ್ಷೇಮದ ಬಗ್ಗೆ ನಿಗಾವಹಿಸುವುದರೊಂದಿಗೆ ಸಾಮಾನ್ಯ ಕೊರೋನಾ ರೋಗ ಲಕ್ಷಣಗಳು ಕಂಡು ಬಂದಲ್ಲಿ ಅವರುಗಳನ್ನು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು. ವರದಿಯು ಬರುವತನಕ ಅವರುಗಳನ್ನು ಹೋಂ ಕ್ವಾರಂಟೈನ್ನಲ್ಲಿ ಇರಿಸುವುದರೊಂದಿಗೆ ಅವರು ಅನಾವಶ್ಯಕವಾಗಿ ಹೊರಗೆ ಬರದಂತೆ ಎಚ್ಚರವಹಿಸಬೇಕು ಎಂದರು.
ಆಯಾ ಗ್ರಾ.ಪಂ. ವ್ಯಾಪ್ತಿಯ ಪಿ.ಡಿ.ಒ ಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಸಕ್ರಿಯವಾಗಿ ಸಭೆಗಳನ್ನು ನಡೆಸುವುದರೊಂದಿಗೆ ಹಾಗೂ ವ್ಯವಸ್ಥಿತವಾದ ಕಾರ್ಯನಿರ್ವಹಿಸುದರಿಂದ ಕೋವಿಡ್ ತಡೆಗಟ್ಟಬಹುದು ಎಂದು ತಿಳಿಸಿದರು.
ಒಂದೇ ಮನೆಯಲ್ಲಿ ಐದಕ್ಕಿಂತ ಹೆಚ್ಚಿನ ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟರೇ ಅಂತವರನ್ನು ಹೋಂ ಐಸೋಲೇಷನ್ನಲ್ಲಿ ಇರಿಸಬೇಕು. ಅಗತ್ಯವೆಂದು ಕಂಡುಬಂದಲ್ಲಿ ಅವರುಗಳಿಗೆ ಕೋವಿಡ್ಕೇರ್ ಸೆಂಟರ್ಗಳಿಗೆ ವರ್ಗಾಯಿಸಬೇಕು. ಆ ಗ್ರಾಮವನ್ನು ಮೈಕ್ರೋಕಂಟೈನ್ಮೆಂಟ್ ಜೋನ್ ಎಂದು ಪರಿಗಣಿಸಬೇಕು. ಜೊತೆಗೆ ಆ ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿ ಇದ್ದರವರನ್ನು ಗುರುತಿಸಿ ಕಡ್ಡಾಯವಾಗಿ ಪರೀಕ್ಷೆಗೆ ಒಳಪಡಿಸಬೇಕು ಎಂದು ಸೂಚನೆ ನೀಡಿದರು.
14 ನೇ ಹಣಕಾಸು ಆಯೋಗದ ಉಳಿಕೆ ಮೊತ್ತ ಹಾಗೂ ಗ್ರಾಮ ಪಂಚಾಯತ್ನ ಉಳಿಕೆ ಹಣದಿಂದಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವಕೊರೋನಾ ಸೋಕಿತರಿಗೆಅಗತ್ಯಮೂಲಭೂತಸೌಕರ್ಯಗಳು, ಆಹಾರ ಸರಬರಾಜು ಮತ್ತುಹೆಲ್ತ್ ಕಿಟ್ಗಳನ್ನು ನೀಡಬೇಕುಎಂದರು.
ಲಸಿಕೆ ನೀಡುವಾಗ ಎರಡನೇ ಡೋಸ್ ಪಡೆಯುವವರಿಗೆ ಆಧ್ಯತೆ ನೀಡಬೇಕು. 18 ರಿಂದ44 ವರ್ಷ ವಯೋಮಿತಿಯವರಿಗೆ ಕೊರೋನಾ ರೋಗ ನಿರೋಧಕ ಲಸಿಕೆಯನ್ನು ಕಡ್ಡಾಯವಾಗಿ ನೋಂದಣಿ ಮಾಡಿಸುವ ಮೂಲಕ ನೀಡಬೇಕು. ವಿಕಲಚೇತನರು ಹಾಗೂ ನೋಂದಣಿ ಮಾಡಲುಗೊತ್ತಿಲ್ಲದವರು ನೇರವಾಗಿ ಗ್ರಾಮ ಪಂಚಾಯತ್ನಲ್ಲಿ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಗಳ ಮೂಲಕ ನೋಂದಣಿ ಮಾಡಿಕೊಳ್ಳಬಹುದು ಎಂದರು.
ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ನೀಡುತ್ತಿರುವ ಆಹಾರ ಪಡಿತರವನ್ನುಅರ್ಹ ಪಡಿತರ ಚೀಟಿದಾರರಿಗೆ ತಪ್ಪದೇ ನೀಡಬೇಕು. ಪಡಿತರವನ್ನು ಬೆಳಿಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ನೀಡಲು ಸಾಧ್ಯವಾಗಲಿಲ್ಲವೆಂದರೆ ಮಧ್ಯಾಹ್ನ 12 ಗಂಟೆಯವರೆಗೆ ನೀಡಲು ಅವಕಾಶ ಮಾಡಿಕೊಡಲಾಗುವುದು ಎಂದ ಅವರು, ಪಡಿತರವನ್ನು ಪಡೆದುಕೊಳ್ಳುವಾಗ ಸಾರ್ವಜನಿಕರು ತಪ್ಪದೇ ಮಾಸ್ಕ್ಗಳನ್ನು ಧರಿಸುವುದರೊಂದಿಗೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕೆಂದು ತಿಳಿಸಿದರು.
ಗ್ರಾಮ ಪಂಚಾಯತ್ ಗಳಲ್ಲಿ ಕೋವಿಡ್ ಸೋಂಕಿತರು ಮನೆಗಳಲ್ಲಿ ಪ್ರತ್ಯೇಕವಾಗಿರಲು ಐಸೋಲೇಷನ್ ವ್ಯವಸ್ಥೆ ಇಲ್ಲದವರನ್ನು ಗುರುತಿಸಿ, ಅವರಿಗೆ ಸ್ಥಳೀಯವಾಗಿ ಲಭ್ಯವಿರುವ , ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒಳಗೊಂಡಿರುವ ಕಟ್ಟಡಗಳಲ್ಲಿ ಕೋವಿಡ್ಕೇರ್ ಸೆಂಟರ್ ಗಳನ್ನು ತೆರೆದು ಅವರಿಗೆ ಅಗತ್ಯ ವ್ಯವಸ್ಥೆಗಳನ್ನು ಒದಗಿಸಬೇಕು. ಕೋವಿಡ್ಕೇರ್ ಸೆಂಟರ್ ಗಳಲ್ಲಿ ದಾಖಲು ಮಾಡುವುದರಿಂದ ಸೋಂಕು ಕುಟುಂಬ ಸದಸ್ಯರಿಗೆ ಹರಡುವುದನ್ನುತಡೆಯುವದರ ಜೊತೆಗೆ, ಸೋಂಕಿತರನ್ನು ಹೆಚ್ಚಿನ ನಿಗಾವಹಿಸಿ ಚಕಿತ್ಸೆ ನೀಡಲು ಹಾಗೂ ತುರ್ತು ಸಂದರ್ಭದಲ್ಲಿ ಆಸ್ಪತ್ರೆಗೆ ದಾಖಲಿಸಲು ಸಾಧ್ಯವಾಗಲಿದೆಎಂದರು.
ಟಾಸ್ಕ್ ಪೋರ್ಸ್ ಸದಸ್ಯರು ಸಕ್ರೀಯವಾಗಿ ಕಾರ್ಯನಿರ್ವಹಿಸಬೇಕು ಇಲ್ಲದಲ್ಲಿ ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದ ಅವರು, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸ್ಟಾಪ್ನರ್ಸ್ಗಳ ಕೊರತೆ ಕಂಡುಬಂದಲ್ಲಿ ಅವರುಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ ಎಂದರು.
ಸಂಸದ ನಳೀನ್ ಕುಮಾರ್ ಕಟೀಲ್ ಮಾತನಾಡಿ, ಗ್ರಾಮ ಪಂಚಾಯತ್ನಲ್ಲಿದಿನಕ್ಕೊಮ್ಮೆಕಾರ್ಯಪಡೆ ಸಭೆಗಳನ್ನು ನಡೆಸಿ ಸ್ಥಳೀಯವಾಗಿ ಬರುವ ಕೋವಿಡ್ ಕೇಸ್ಗಳ ಸಮಗ್ರ ವರದಿಯನ್ನು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಂದ ಪಡೆದು ಅವರುಗಳ ಯೋಗ ಕ್ಷೇಮ ವಿಚಾರಿಸಬೇಕು ಎಂದರು.
ಕಾರ್ಯಪಡೆಯ ಸದಸ್ಯರುಗಳು ಪ್ರತಿ ಮನೆಗಳಿಗೆ ಭೇಟಿ ನೀಡಿಕೋವಿಡ್ ಸಾಮಾನ್ಯರೋಗ ಲಕ್ಷಣಗಳನ್ನು ಹೊಂದಿದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೋವಿಡ್ ಪರೀಕ್ಷೆ ಮಾಡಿಸುವಂತೆ ತಿಳಿಸಬೇಕು, ಸೋಂಕಿತರ ಆರೋಗ್ಯದ ವರದಿಯನ್ನು ಪಟ್ಟಿ ಮಾಡಿಕೊಳ್ಳಬೇಕುಎಂದರು.
ಮದುವೆ ಸಮಾರಂಭ ಹಾಗೂ ಇತರೆ ಸಾಮಾಜಿಕ ಕಾರ್ಯಕ್ರಮಗಳನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂದರು.