ಬೆಳ್ತಂಗಡಿ: ಕೇಂದ್ರ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅನುಮತಿ ಇಲ್ಲದೆ ಯಾವುದೇ ಸುದ್ದಿ ಮತ್ತು ಪ್ರಸ್ತುತ ಘಟನೆಗಳ ಮಾಹಿತಿ ಮತ್ತು ಸುದ್ದಿಯನ್ನು ಬಿತ್ತರಿಸುವಂತಿಲ್ಲ.
ರಾಷ್ಟ್ರದ ಹಿತಾಸಕ್ತಿಯಿಂದ ಸುದ್ದಿ ಪ್ರಸಾರಕ್ಕೆ ಸಚಿವಾಲಯದ ಅನುಮತಿ ಅಗತ್ಯ. ಆದರೆ ಯೂಟ್ಯೂಬ್ ಚಾನೆಲ್ ಗಳಾದ ಡಿ ಟಾಕ್ಸ್ ,ಕುಡ್ಲ ರ್ಯಾಂಪೇಜ್, ಮಹಮ್ಮದ ಸಮೀರ್, ವಾರ್ತಾ ಭಾರತಿ, ಕನ್ನಡ ಪ್ಲಾನೆಟ್ ಇವರುಗಳು ಸುದ್ದಿಯನ್ನು ಮತ್ತು ಸುಳ್ಳು ಸುದ್ದಿಯನ್ನು ಬಿತ್ತರ ಮಾಡಿದಲ್ಲದೆ . ಪ್ರೊಟೆಕ್ಟೆಡ್ ವಿಟ್ನೆಸ್ ಸ್ಕೀಮ್ ಅಡಿಯಲ್ಲಿದ್ದ ಚಿನ್ನಯ್ಯನ ಕಾನೂನು ಬಾಹಿರವಾಗಿ ಸಂದರ್ಶನ ಮಾಡಿ. ಭಾರತೀಯ ಕಾನೂನನ್ನು ನಗೆಪಾಟಲಿ ಮಾಡಿದ್ದಾರೆ. ಚಿನ್ನಯ್ಯನ್ನ ಸಂದರ್ಶನವನ್ನು ದೂರು ದಾಖಲಾತಿಗೂ ಮುನ್ನ ಅಥವಾ ದೂರು ದಾಖಲಾದ ನಂತರ ಅಥವಾ ಆರೋಪಿಯಾದ ನಂತರ ಈ ಮೂರು ರೀತಿಯಲ್ಲಿಯೂ ಸಂದರ್ಶನ ತೆಗೆದುಕೊಂಡಿದ್ದರು ಅದು ಅಪರಾಧ. ಈ ಯೂಟ್ಯೂಬರ್ ಗಳ ಹಣಕಾಸಿನ ಬಗ್ಗೆ ತನಿಖೆ ಆಗಬೇಕು ಈ ನಿಟ್ಟಿನಲ್ಲಿ ಎಸ್.ಐಟಿಗೆ ದೂರು ನೀಡಲಾಗಿದೆ. ದೂರನ್ನು ಎಸ್.ಐ.ಟಿ ಅಧಿಕಾರಿ ಸೈಮನ್ ಅವರು ಸ್ವೀಕರಿಸಿ ಹಿಂಬರಹ ನೀಡಿದ್ದಾರೆ.