ಹಳೆಯಂಗಡಿ: ಭಾರತ ಸರಕಾರ ನೆಹರೂ ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ ಮಂಗಳೂರು ಮತ್ತು ತಾಲೂಕು ಯುವಜನ ಒಕ್ಕೂಟ ಮಂಗಳೂರು ಇವರುಗಳ ಸಹಯೋಗದಲ್ಲಿ ರಾಜ್ಯ ಪ್ರಶಸ್ತಿ ವಿಜೇತ ಶ್ರೀ ವಿದ್ಯಾವಿನಾಯಕ ಯುವಕ ಮಂಡಲ (ರಿ) ಹಳೆಯಂಗಡಿ ಇದರ ಆಶ್ರಯದಲ್ಲಿ ಪಡುಪಣಂಬೂರು ವ್ಯವಸಾಯಿಕ ಸೇವಾ ಸಹಕಾರಿ ಸಂಘ ನಿಯಮಿತ ಹಳೆಯಂಗಡಿ, ಶ್ರೀ ವಿನಾಯಕ ಮಿತ್ರ ಮಂಡಳಿ (ರಿ), ಪಕ್ಷಿಕೆರೆ, ಶ್ರೀ ಹರಿ ಸ್ಪೋರ್ಟ್ಸ್ ಕ್ಲಬ್ (ರಿ) ಹರಿಪಾದ, ಶ್ರೀ ವಿದ್ಯಾವಿನಾಯಕ ರಜತ ಸೇವಾ ಟ್ರಸ್ಟ್ (ರಿ) ಹಳೆಯಂಗಡಿ, ಸುವರ್ಣ ಮಹೋತ್ಸವ ಸಮಿತಿ, ಶ್ರೀ ವಿದ್ಯಾವಿನಾಯಕ ಯುವಕ ಮಂಡಲ ಹಳೆಯಂಗಡಿ ಮತ್ತು ಯುವತಿ ಮತ್ತು ಮಹಿಳಾ ಮಂಡಲ (ರಿ), ಹಳೆಯಂಗಡಿ ಇವರುಗಳ ಸಹಕಾರದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕ್ರೀಡಾ ಕೂಟ-2021-22 ಪಂಜದ ಗುತ್ತು ಶಾಂತಾರಾಮ ಶೆಟ್ಟಿ ಸರಕಾರಿ ಪ್ರೌಢಶಾಲೆ ಕೆಮ್ರಾಲ್ನ ಕ್ರೀಡಾಂಗಣದಲ್ಲಿ ದಿನಾಂಕ 30-01-2022ರಂದು ಜರಗಿತು. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು ಇದರ ಮಾಜಿ ಉಪಾಧ್ಯಕ್ಷರಾದ ಕಸ್ತೂರಿ ಪಂಜ ಕ್ರೀಡಾಕೂಟವನ್ನು ಉದ್ಘಾಟಿಸಿದರು.

ಕೆಮ್ರಾಲ್ ಗ್ರಾಮ ಪಂಚಾಯತ್ನ ಅಧ್ಯಕ್ಷರಾದ ಲೀಲಾ ಕೃಷ್ಣಪ್ಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯತ್ ಮಂಗಳೂರು ಇದರ ಮಾಜಿ ಸದಸ್ಯರಾದ ವಿನೋದ್ ಕುಮಾರ್ ಬೊಳ್ಳೂರು ಹಾಗೂ ಪಂಜದಗುತ್ತು ಶಾಂತಾರಾಮ ಶೆಟ್ಟಿ ಸರಕಾರಿ ಪ್ರೌಢಶಾಲೆ ಕೆಮ್ರಾಲ್ ಇದರ ಮುಖ್ಯೋಪಧ್ಯಾಯರಾದ ಎನ್.ಡಿ.ಅಜ್ಜಯ್ಯ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ನೆಹರೂ ಯುವ ಕೇಂದ್ರ ಮಂಗಳೂರು ಇದರ ಜಿಲ್ಲಾ ಯುವ ಅಧಿಕಾರಿ ರಘುವೀರ್ ಸೂಟರ್ಪೇಟೆ ಕ್ರೀಡಾಕೂಟದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಯುವಕ ಮಂಡಲದ ಅಧ್ಯಕ್ಷರಾದ ಯತೀಶ್ ಕೋಟ್ಯಾನ್, ಸುವರ್ಣ ಮಹೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ಸುಧಾಕರ ಆರ್.ಅಮೀನ್, ರಜತ ಸೇವಾ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಟ್ಯಾನಿ ಡಿ.ಕೋಸ್ತ, ಶ್ರೀ ವಿನಾಯಕ ಮಿತ್ರ ಮಂಡಳಿ(ರಿ) ಪಕ್ಷಿಕೆರೆ ಇದರ ಅಧ್ಯಕ್ಷರಾದ ಚಂದ್ರಹಾಸ್, ಶ್ರೀ ಹರಿ ಸ್ಪೋರ್ಟ್ಸ್ ಕ್ಲಬ್ (ರಿ) ಹರಿಪಾದ ಇದರ ಅಧ್ಯಕ್ಷರಾದ ರವಿಚಂದ್ರ, ಮಹಿಳಾ ಮಂಡಲದ ಅಧ್ಯಕ್ಷರಾದ ರೇಷ್ಮಾ ಆಶ್ರಫ್, ಯುವತಿ ಮಂಡಲದ ಅಧ್ಯಕ್ಷರಾದ ಕು.ರಕ್ಷಿತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಆಗಮಿಸಿದ ಎಲ್ಲಾ ಸ್ಪರ್ಧಾಳುಗಳಿಗೆ ಊಟ ಮತ್ತು ಉಪಾಹಾರಗಳನ್ನು ನೀಡಲಾಗಿತ್ತು. ಕು.ಚೈತ್ರಾ ಮತ್ತು ಕು.ಸುಶ್ಮಿತಾರವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಸಮಾರಂಭದಲ್ಲಿ ಯುವಕ ಮಂಡಲದ ಅಧ್ಯಕ್ಷರಾದ ಯತೀಶ್ ಕೋಟ್ಯಾನ್ ಸ್ವಾಗತಿಸಿ, ರಜತ ಸೇವಾ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಟ್ಯಾನಿ ಡಿ.ಕೋಸ್ತ ವಂದಿಸಿದರು. ಸುವರ್ಣ ಮಹೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ರಾಮ್ದಾಸ್ ಪಾವಂಜೆ ಕಾರ್ಯಕ್ರಮ ನಿರೂಪಿಸಿದ್ದರು.