ವರದಿ ರಾಯಿ ರಾಜಕುಮಾರ ಮೂಡುಬಿದಿರೆ 

ಮೂಡುಬಿದಿರೆ: ಹಿರಿಯ ಸಾಹಿತಿ, ಕಾಂತಾವರ ಕನ್ನಡ ಸಂಘದ ಮೂಲ ಪ್ರೇರಕ ಡಾ.ನಾ. ಮೊಗಸಾಲೆ ಇವರ 80ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಅಭಿನಂದನಾ ಸಮಾರಂಭ ಮೂಡುಬಿದಿರೆ ಸಮಾಜ ಮಂದಿರದಲ್ಲಿ ಸೆಪ್ಟೆಂಬರ್ 20ರಂದು ನಡೆಯಲಿದೆ. ಸಮಾಜ ಮಂದಿರ ಸಭಾ, ಆಳ್ವಾಸ್ ಪ್ರತಿಷ್ಠಾನ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ತಾಲೂಕು ಶಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ.

ಇದೇ ಸಂದರ್ಭದಲ್ಲಿ ಮೊಗಸಾಲೆಯವರ ಕೃತಿಗಳ ಬಗ್ಗೆ ವಿಮರ್ಶೆಯ ಕಾರ್ಯಕ್ರಮವು ಇದ್ದು ಸಂಪಾದಿಸಿದ ಕೃತಿಗಳ ಪರಮರ್ಶೆಯು ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.