ಐ ಡಿ ಏ ದಕ್ಷಿಣ ಕನ್ನಡ ಬ್ರಾಂಚ್ ನ ವತಿಯಿಂದ "ನ್ಯೂ ಏಜ್  ಪ್ರಾಕ್ಟೀಸ್  ಡೈನಾಮಿಕ್ಸ್   " ಈ ವಿಷಯದ  ಬಗ್ಗೆ ಒಂದು ದಿನದ ದಂತ ವೈದ್ಯಕೀಯ  ಕಾರ್ಯಾಗಾರವನ್ನು ನಗರದ ಹೋಟೆಲ್ ಮಾಯಾ ಇಂಟರ್ನ್ಯಾಷನಲ್ ನಲ್ಲಿ ಜೂನ್ 7 ರಂದು ಸಾಯಂಕಾಲ  ನಡೆಸಲಾಯಿತು. ಇದನ್ನು ಐ ಡಿ ಏ ದಕ್ಷಿಣ ಕನ್ನಡ ಬ್ರಾಂಚ್ ನ ಅಧ್ಯಕ್ಷರಾದ ಡಾ. ಪದ್ಮರಾಜ್ ಹೆಗ್ಡೆ ಯವರು ಉದ್ಘಾಟಿಸಿದರು. 

ಮುಖ್ಯ ಸಂಪನ್ಮೂಲ ವ್ಯೆಕ್ತಿಯಾಗಿ ಡಾ. ಕುಮಾರಸ್ವಾಮಿ, ಪ್ರೊಫೆಸರ್ ಅಂಡ್ ಇಂಪ್ಲಾಂಟಾಲೊಜಿಸ್ಟ್ ಮುಂಬೈ, ಇವರು  ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ದಂತ ವೈದ್ಯಕೀಯ ದಲ್ಲಿ ಹೊಸ ಆವಿಷ್ಕಾರಗಳು ಹಾಗು ರೋಗಿಯ ಆರೈಕೆ ಇದರ ಬಗ್ಗೆ  ಮಾಹಿತಿ ಯನ್ನು ಅವರು ಈ ಸಂದರ್ಭದಲ್ಲಿ ವಿವರಿಸಿದರು.  ಐ ಡಿ ಏ ದಕ್ಷಿಣ ಕನ್ನಡ ಬ್ರಾಂಚ್ ನ ಕಾರ್ಯದರ್ಶಿ ಡಾ. ಭರತ್ ಪ್ರಭು ಹಾಗು ಖಜಾಂಚಿ ಡಾ.ಪ್ರಸನ್ನ ಕುಮಾರ್ ರಾವ್ ರವರು ಉಪಸ್ಥಿತರಿದ್ದರು. ಡಾ. ಅದಿತಿರವರು ಕಾರ್ಯಕ್ರಮ ನಿರೂಪಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯ ಹಲವಾರು ದಂತವೈದ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.