ಕಾಪು ದಕ್ಷಿಣ ಬ್ಲಾಕ್‌ನ ಪಡುಬಿದ್ರಿ, ಉಚ್ಚಿಲ, ಶಿರ್ವ, ಕುರ್ಕಾಲು ಜಿಲ್ಲಾ ಪಂಚಾಯಿತಿಗಳ ವ್ಯಾಪ್ತಿಯ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪಕ್ಷದಲ್ಲಿ ಸ್ಪರ್ಧಿಸಿದ್ದ ಪ್ರತಿನಿಧಿಗಳು, ಕಾರ್ಯಕರ್ತರು, ನಾಯಕರುಗಳ ಜೊತೆ ಹಮ್ಮಿಕೊಂಡಿದ್ದ ಕ್ಷೇತ್ರವಾರು ಸಭೆಯಲ್ಲಿ ವಿಧಾನ ಪರಿಷತ್ತಿನ ಸದಸ್ಯ ಮಂಜುನಾಥ ಭಂಡಾರಿ ಭಾಗವಹಿಸಿದರು.

ಈ ವೇಳೆ ಮಾತನಾಡಿದ ಮಂಜುನಾಥ ಭಂಡಾರಿ, ಬೆಲೆ ಏರಿಕೆಯ ಕುರಿತು ಗ್ರಾಮೀಣ ಜನರಲ್ಲಿ ಅರಿವು ಮೂಡಿಸುವ ಮೂಲಕ  ಕಾರ್ಯಕರ್ತರು ಸಂಘಟನಾತ್ಮಕವಾಗಿ ಕೆಲಸ ಮಾಡಲು ಪಕ್ಷದ ನಾಯಕರು ಕಾರ್ಯಕರ್ತರ ಬೆನ್ನೆಲುಬಾಗಿ ನಿಲ್ಲಬೇಕು ಎಂದು ಯವರು ಸಲಹೆ ನೀಡಿದವರು, ಗ್ರಾಮ ಪಂಚಾಯತ್ ಸದಸ್ಯರು, ಉನ್ನತ ನಾಯಕರು ಪಕ್ಷದ ಕಟ್ಟ ಕಡೆಯ ಕಾರ್ಯಕರ್ತರ ಭಾವನೆಗಳಿಗೆ ಸ್ಪಂದಿಸುವ  ಭರವಸೆ ನೀಡಿದರು.

ಸಭೆಯಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಕಾಪು ದಕ್ಷಿಣ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಂತಲತ ಶೆಟ್ಟಿ, ಕಾಪು ದಕ್ಷಿಣ ಬ್ಲಾಕ್‌ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ಕಾಪು ದಕ್ಷಿಣ  ಯುವ ಕಾಂಗ್ರೆಸ್ ಅಧ್ಯಕ್ಷ ರಮೀಝ್ ಹಾಗೂ ಸುಕುಮಾರ್ ಪಡುಬಿದ್ರಿ, ಮಾಜಿ ಗ್ರಾ.ಪಂ. ಅಧ್ಯಕ್ಷ  ಸರಸು ಡಿ ಬಂಗೇರ ಉಪಸ್ಥಿತರಿದ್ದರು.