ಮಂಗಳೂರು, ಮಾರ್ಚ್ 13: ಪಿಂಗಾರ ಸಾಹಿತ್ಯ ಬಳಗದ ರೇಮಂಡ್ ಡಿ ಕುನ್ಹಾ ನೇತೃ ತ್ವದಲ್ಲಿ ಡಾ ಸುರೇಶ ನೆಗಳಗುಳಿ ಸಂಚಾಲಕತ್ವದಲ್ಲಿ ,ಸಂದೇಶ ಪ್ರತಿಷ್ಠಾನ ಸಹಯೋಗದಲ್ಲಿ ಮಂಗಳೂರು ನಂತೂರು ಸಮೀಪದ ಸಂದೇಶ ಪ್ರತಿಷ್ಠಾನ ಸಭಾಂಗಣದಲ್ಲಿ ಮಹಿಳಾ ದಿನಾಚರಣೆಯ ಪ್ರಯುಕ್ತ ಅಂತಾರಾಜ್ಯ ಮಟ್ಟದ ಮಾತೃಭಾಷಾ ಪ್ರದಾನ ಕವಿಗೋಷ್ಠಿಗಳನ್ನು ಹಮ್ಮಿಕೊಳ್ಳಲಾಗಿತ್ತು. ಸುಮಾರು 50 ಮೀರಿದ ರಾಜ್ಯಾದ್ಯಂತ ಕವಿಗಳನೇಕರು‌ ತಮ್ಮ ಮೂಲಭಾಷೆಯಲ್ಲಿ ತರಹೇವಾರಿ ಕವನ ಕವಿತೆಗಳನ್ನು ವಾಚಿಸಿದರು.

ಈ‌ತನ್ಮಧ್ಯೆ ಸಾಮಾಜಿಕ‌ ಕಾರ್ಯಕರ್ತೆ‌ ರಾಣಿ ಪುಷ್ಪಲತಾ ದೇವಿಯವರಿಗೆ‌ ಅವರ ಸಾಧನೆಗಳನ್ನು ಗುರುತಿಸಿ 'ಕಲಾ‌ ಕುಸುಮ' ಎಂಬ ಪಾರಿತೋಷಕ ಸಹಿತ ಸನ್ಮಾನಿಸಲಾಯಿತು.

ಅವರು ಮಾತನಾಡುತ್ತ ತನಗೆ‌ ಸನ್ಮಾನ ‌ಪಡೆವ ಆಸೆ ಆಸಕ್ತಿ ಸಾಮರ್ಥ್ಯ ಯಾವುದೂ ಇಲ್ಲ. ಅರ್ಹರಿಗೆ ಸನ್ಮಾನ ‌ನೀಡುವುದಷ್ಟೇ ಗೊತ್ತು.ಆದರೂ‌ ಆತ್ಮೀಯರ ದಾಕ್ಷಿಣ್ಣ್ಯಕ್ಕೊಳಗಾಗಿ ಒಲ್ಲೆ ಎನ್ನಲು ಮನಸ್ಸು ಬರಲಿಲ್ಲ ಎಂದರು

ಸಾಮಾಜಿಕ‌ ಕಾರ್ಯಕರ್ತ ಗಾಯಕ ಗಂಗಾಧರ ಗಾಂಧಿಯವರು  ತಾವು ಇನ್ನೂರಕ್ಕೂ ಹೆಚ್ಚು ಮಂದಿಗೆ ಪ್ರಶಸ್ತಿ ಕೊಟ್ಟಿದ್ದೇವೆ.‌ ಪ್ರಶಸ್ತಿಯು ಅರ್ಹತೆಗೆ ಸಂದ ಗೌರವವಾಗಿರ ಬೇಕು.‌ಜ್ಞಾನಿಯಾದವನು ಹೇಗೆ ತಾನು ಇನ್ನೂ ಅಪೂರ್ಣ ಎಂದು ಭಾವಿಸುತ್ತಾನೆಯೋ ಹಾಗೆ ರಾಣಿಯವರ ಮನಸ್ಥಿತಿ ಅಷ್ಟೆ.ಅವರಿಗೆ ಕೊಡುವ ಪ್ರಶಸ್ತಿ ಯು ಅತಿ ಮೌಲ್ಯಾಧಾರಿತವೇ ಆಗಿದೆ. ಪ್ರಸ್ತುತ ಕಾಲದಲ್ಲಿ ಪ್ರಶಸ್ತಿಗಳ ಮಾರಾಟವೇ ನಡೆಯುತ್ತಿದ್ದು ಅದಕ್ಕೆ ಮುಗಿ‌ಬೀಳುವವರನ್ನು ನೋಡುವಾಗ ಅಸಹ್ಯ ಎನಿಸುತ್ತದೆ. ಇದಾದರೆ ಹಾಗಲ್ಲ. ಅರಿವಿಗೂ ಬರದೆ ಸಂದ ಗೌರವ ಎಂದರು.

ರೇಮಂಡ್ ಡಿಕುನಾ ತಾಕೊಡೆ ಅವರು ಬರೆದ ಕೃತಿ 'ಪತಿ ಪತ್ನಿ ಸುತಾಲಯ'ವನ್ನು ಖರಿದೂಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದ ಮಂಗಳೂರು ಧರ್ಮಪ್ರಾಂತ್ಯದ ಪಿಆರ್ ಓ ಸಂದೇಶ ಪ್ರತಿಷ್ಠಾನದ ನಿರ್ದೇಶಕರಾದ ರಾಯ್ ಕ್ಯಾಸ್ತಲೀನೋ ಅವರು ಸರಳ ಸುಂದರ ಸಾಂಸ್ಕೃತಿಕ ಸಮಾರಂಭದ ಈ ಕಾರ್ಯಕ್ರಮ  ಹಲವಾರು ಸಾಹಿತಿಗಳಿಗೆ ವೇದಿಕೆ‌ ಒದಗಿಸಿದ್ದು ಸ್ತುತ್ಯ. ಯಾವಾಗ  ಬೇಕಾದರೂ ಇಲ್ಲಿ ಈ ರೀತಿಯ ಸಮಾರಂಭ ಆಯೋಜನೆಗೆ ಮುಕ್ತ ಅವಕಾಶವಿದೆ ಎಂದರು.‌ ಅಭಿಮೊ‌ ಟೆಕ್ನಾಲಜಿ ಸಂಸ್ಥಾಪಕ‌ ಮತ್ತು ಕರ್ನಾಟಕ ಕೊಂಕಣಿ ಎಕಾಡೆಮಿ ಸದಸ್ಯ ಉಳ್ಳಾಲದ ನವೀನ್ ನಾಯಕ್ ರವರು ಈ ರೀತಿಯ ಕನ್ನಡ ಬೆಳೆಸುವ ಕಾರ್ಯಕ್ರಮಕ್ಕೆ ಸದಾ ನೆರವು ನೀಡುವ ಭರವಸೆ ನೀಡುತ್ತಾ ಮೇ ತಿಂಗಳ ಮೊದಲ ದಿನ‌ ಉಳ್ಳಾಲದಲ್ಲಿ ಒಂದು ಸಮ್ಮೇಳನ‌ನೆಡಸುವ ಇಂಗಿತ ವ್ಯಕ್ತ ಪಡಿಸಿದರು.

ರೇಮಂಡ್ ಡಿಕುನ್ಹಾ ತಾಕೊಡೆಯವರು ಆಗಾಗ ಸಾಹಿತ್ಯ ಗೋಷ್ಠಿ ನಡೆಸುವ ಉದ್ದೇಶ, ಹೊಸಬರಿಗೆ ಪ್ರೇರಣೆ ಮತ್ತು ಸಾಹಿತ್ಯ ಚಲಾವಣೆಗಾಗಿ ಡಾ ಸುರೇಶ ನೆಗಳಗುಳಿ ಯವರೊಡನೆ ಜಂಟಿಯಾಗಿ ಸಮಾರಂಭ ಸನ್ನಾಹ ಅಭ್ಯಾಸವಾಗಿ ಬಿಟ್ಟಿದೆ. ಇದು ಮುಂದುವರಿಯಲಿದೆ ಎಂದರು.

ಕಥಾ ಬಿಂದು ಪ್ರಕಾಶನದ ಪಿ.ವಿ.ಪ್ರದೀಪ್ ಕುಮಾರ್ ಮಾತನಾಡುತ್ತಾ ಸಾಹಿತ್ಯ ಸಮ್ಮೇಳನದ ಅಗತ್ಯ ಮತ್ತು ತನ್ನ ಉತ್ಸಾಹ ಇವುಗಳ ಸಾರಾಂಶ ತಿಳಿಸಿದರು

ಈ ಕವಿಗೋಷ್ಠಿ- ಅಧ್ಯಕ್ಷತೆ ವಹಿಸಿರುವ ಸುಶೀಲಾ ಭಟ್ ಪಾತನಡ್ಕ, ಇವರು ನೆಗಳಗುಳಿ ತವರಿನವರು ಈಗ ಕೇರಳದಲ್ಲಿ ಇದ್ದರೂ ಸಾಹಿತ್ಯ ಸೇವೆ ಮಾಡುತ್ತಿದ್ದಾರೆ.ಬಾ ಕಾ ಹು ಎಂಬ ಬಾಳೆ ಕಾಯಿಯ ಹುಡಿಯಂದ ಶ್ಯಾವಿಗೆಸಂಡಿಗೆ ಮಾಡುವ ಅವಿಷ್ಕಾರವನ್ನು ಹತ್ತುವರ್ಷದ ಹಿಂದೆಯೇ ಮಾಡಿದ್ದರಲ್ಲದೆ ತತ್ಸಂಬಂಧೀ ಪುಸ್ತಕ,ಹಲವೆಡೆ ಕಾರ್ಯಾಗಾರ,ರೇಡಿಯೋ ಸಂದರ್ಶನ ಸಹಿತ ಮಾಡಿದವರು. ಆದರೆ ಸರಕಾರ ಮಾತ್ರ ಅಷ್ಡಾಗಿ ಗುರುತಿಸಲಿಲ್ಲ. ಮಾವು ಮತ್ತು ಅದರ ವ್ಯಂಜನಗಳ ಬಗೆಗೂ ಪುಸ್ತಕ ಬರೆದಿರುವರು.ಎಳವೆಯಲ್ಲಿಯೇ ನವಭಾರತ ಪತ್ರಿಕೆಯವರಿಂದ "ನಗೆಬಂಧು" ಎಂಬ ಕಾವ್ಯ ನಾಮ ಪಡೆದವರು.ಈ. ಇಳಿ ಹರೆಯದಲ್ಲಿ ಇನ್ನೂ ಸಾಹಿತ್ಯ ಚಟುವಟಿಕೆ ಮುಂದುವರಿಸುತ್ತಾ ಇರುವುದು ಅವರ ಧೀ ಶಕ್ತಿಗೆ ನಿದರ್ಶನ ಎಂದು ಡಾ ಸುರೇಶ ನೆಗಳಗುಳಿ ಯವರು ವಿಶ್ಲೇಷಿಸಿದರು.

ಅಧ್ಯಕ್ಷ ಪೀಠದಿಂದ ಮಾತನಾಡುತ್ತಾ ಸುಶೀಲಾ ಎಸ್ ಎನ್ ಭಟ್ ರವರು, ಮಹಿಳಾ ಸ್ವಾತಂತ್ಯ, ಮಹಿಳಾ ಶೋಷಣೆ ಇತ್ಯಾದಿಗಳು‌ ಹೆಚ್ಚಾಗದಿರಲು ಸಾಹಿತ್ಯದಲ್ಲಿ ಆ ಕುರಿತಾದ ಬರಹಗಳು ಬರ ಬೇಕು. ಮಹಿಳೆ ಅಬಲೆ ಅನ್ನುವ ಮಾತು ಅಸಂಗತ.ಮಹಿಳೆ ಇಲ್ಲದೆ ಮನೆ ಬೆಳಗದು ಹಾಗೆಯೇ ಮಾತೃ ಭಾಷೆ ಕೂಡ ,ಮಾತೆಯಂತೆ,ಮಹಿಳೆಯಂತೆ ಜೀವನ ಬೆಳಗಲು ಪೂರಕ.ಹಾಗಾಗಿಯೇ ಮಾತೃ ಭಾಷೆಯ ಮೌಲ್ಯ ಅರಿತು ಬಾಳುವ ಕಿವಿ ಮಾತು ಹೇಳಿ ಹವ್ಯಕ ಹಾಗೂ ಕನ್ನಡ ಭಾಷೆಯ ಸ್ವರಚಿತ ಕವನ ವಾಚಿಸಿದರು. ಕವಿಗಳ ಕವನಗಳನ್ನು ಮನಸಾರೆ ಕೊಂಡಾಡಿದರು.

ಇದೇ ವೇಳೆ ಹಾಸನ ಬರಹಗಾರರ ಸಂಘ ಕೊಡ ಮಾಡಿದ ವರ್ಷದ ಬರಹಗಾರ ಎಂಬ ಪ್ರಶಸ್ತಿಯನ್ನು ಗುಣಾಜೆ ರಾಮಚಂದ್ರ ಭಟ್ಟರಿಗೆ ಇದೇ ವೇದಿಕೆಯಲ್ಲಿ ಪ್ರದಾನ ಮಾಡಲಾಯಿತು