ನೆಹರು ಯುವ ಕೇಂದ್ರ ಉಡುಪಿ ಹಾಗೂ ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಸಂಯುಕ್ತ ಆಶ್ರಯದಲ್ಲಿ ಬುಧವಾರ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ರಂಗಮಂದಿರಲ್ಲಿ ಫಿಟ್ ಇಂಡಿಯಾ ತರಬೇತಿ ಕಾರ್ಯಕ್ರಮದ ಅಂಗವಾಗಿ ಯೋಗ ತರಬೇತುದಾರರಾದ ಅಬ್ಬನಡ್ಕ ಹರಿಪ್ರಸಾದ್ ಆಚಾರ್ಯ ಅವರು ಯುವಜನರ ಆರೋಗ್ಯ, ನೈರ್ಮಲ್ಯ, ರೋಗ ನಿರೋಧಕ ಶಕ್ತಿ, ಯೋಗ ಮತ್ತು ಜೀವನ ಶೈಲಿ ಕುರಿತು ತರಬೇತಿ ನೀಡಿದರು. ಜರಗಿತು.

ಸಮಾರಂಭದ ಅಧ್ಯಕ್ಷತೆಯನ್ನು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷ ಪ್ರಶಾಂತ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ನಂದಳಿಕೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಿತ್ಯಾನಂದ ಅಮೀನ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ವೇದಿಕೆಯಲ್ಲಿ ನಂದಳಿಕೆ ಗ್ರಾಮ ಪಂಚಾಯತ್ ಸದಸ್ಯೆ ಅಬ್ಬನಡ್ಕ ಪದ್ಮಶ್ರೀ ಸತೀಶ್ ಪೂಜಾರಿ, ಬೆಳ್ಮಣ್ಣು ಜೇಸಿಐ ಘಟಕದ ಅಧ್ಯಕ್ಷರಾದ ವೀಣೇಶ್ ಅಮೀನ್, ಉಡುಪಿ ನೆಹರು ಯುವ ಕೇಂದ್ರ ಇಲಾಖೆಯ ವರ್ಷಿತಾ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಸ್ಥಾಪಕಾಧ್ಯಕ್ಷ ಇನ್ನ ವಿಠಲ ಮೂಲ್ಯ, ನಿಕಟ ಪೂರ್ವಾಧ್ಯಕ್ಷ ಬೋಳ ಉದಯ ಅಂಚನ್, ಮಹಿಳಾ ಸಂಘಟನಾ ಕಾರ್ಯದರ್ಶಿ ಸಂಧ್ಯಾ ಶೆಟ್ಟಿ ವೇದಿಕೆಯಲ್ಲಿದ್ದರು.

ಸಂಘದ ಅಧ್ಯಕ್ಷ ಪ್ರಶಾಂತ್ ಪೂಜಾರಿ ಸ್ವಾಗತಿಸಿದರು. ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಸುರೇಶ್ ಕಾಸ್ರಬೈಲು ವಂದಿಸಿದರು.