ಮಂಗಳೂರು, ಜು.6; ನಮ್ಮ ಜೀವದ ರಕ್ಷಣೆ,ಇತರರ ಅಮೂಲ್ಯ ಜೀವ ರಕ್ಷಣೆಗೆ ಪ್ರಥಮ ಚಿಕಿತ್ಸಾ ಕೌಶಲ್ಯದ ಅರಿವು ಅಗತ್ಯ ಎಂದು ನಿಟ್ಟೆ (ಪರಿಗಣಿತ )ವಿಶ್ವ ವಿದ್ಯಾನಿಲಯದ ಕುಲಪತಿ ಡಾ.ಸತೀಶ್ ಕುಮಾರ್ ಭಂಡಾರಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ನಿಟ್ಟೆ ಕೆ.ಎಸ್.ಹೆಗ್ಡೆ ಮೆಡಿಕಲ್ ಅಕಾಡೆಮಿ,ಆಸ್ಪತ್ರೆ ದೇರಳಕಟ್ಟೆ ಇದರ ಸಹಯೋಗದಲ್ಲಿ ನಗರದ ಪತ್ರಿಕಾ ಭವನದಲ್ಲಿಂದು ಹಮ್ಮಿಕೊಂಡ ಪ್ರಥಮ ಚಿಕಿತ್ಸಾ ತರಬೇತಿ ಶಿಬಿರ ವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಇಂದಿಗೂ ಪ್ರತಿ ವರ್ಷ ನಮ್ಮ ದೇಶದ ದಲ್ಲಿ ತುರ್ತು ಸಂದರ್ಭದಲ್ಲಿ ಆಸ್ಪತ್ರೆಗೆ ಸೇರಿಸುವ ಮೊದಲೇ ಸಾವಿರಾರು ರೋಗಿಗಳು ಸಾವನ್ನ ಪ್ಪುತ್ತಿರುವ ಘಟನೆಗಳು ನಡೆಯುತ್ತಿದೆ. ಆದರೆ ಇಂತಹ ಸಂದರ್ಭದಲ್ಲಿ ಪ್ರಥಮ ಚಿಕಿತ್ಸೆ ದೊರೆತರೆ ಸಾಕಷ್ಟು ಅಮೂಲ್ಯ ಜೀವಗಳನ್ನು ಉಳಿಸಬಹುದು.ಅದಕ್ಕಾಗಿ ಸಮಾಜದ ವಿವಿಧ ಸ್ತರಗಳಲ್ಲಿ ಕಾರ್ಯ ನಿರ್ವಹಿಸುತ್ತಿರು ವವರಿಗೆ ಪ್ರಥಮ ಚಿಕಿತ್ಸೆ ಯ ಮಾಹಿತಿ ಕೌಶಲ್ಯ ವನ್ನು ನೀಡುವ ಕೆಲಸ ಕ್ಷೇಮದ ಮೂಲಕ ನಡೆಯುತ್ತಿದೆ ಎಂದು ಡಾ.ಸತೀಶ್ ಕುಮಾರ್ ಭಂಡಾರಿ ತಿಳಿಸಿದ್ದಾರೆ.
ಕೆ.ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ.(ಅರಿವಳಿಕೆ ಶಾಸ್ತ್ರ ಮತ್ತು ತುರ್ತು ನಿಗಾ ವಿಭಾಗ)ದ ಪ್ರೊಫೆಸರ್ ಡಾ.ಗಾಯತ್ರಿ ಭಟ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಸಮಾರಂಭದ ಅಧ್ಯಕ್ಷತೆಯನ್ನು
ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ವಹಿಸಿದ್ದರು.ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು.ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್ ಕಾರ್ಯಕ್ರಮ ನಿರೊಪಿಸಿದರು.
ಉಪಾಧ್ಯಕ್ಷ ಅನ್ಸಾರ್ ಇನೋಳಿ ಕಾರ್ಯಕ್ರ ಮ ಸಂಯೋಜಿಸಿದರು.
ಪ್ರಥಮ ಚಿಕಿತ್ಸಾ ತರಬೇತಿ ಶಿಬಿರದಲ್ಲಿ ತರಬೇತುದಾರಾದ ಡಾ.ಗಾಯತ್ರಿ ಭಟ್ ನೇತೃತ್ವದ ವೈದ್ಯರ ತಂಡ ದ ಸದಸ್ಯ ರಾದ
ಡಾ.ವೈದೇಹಿ ಭೃಗು,ಡಾ.ವರದಾ ಕಂಜಲ್ಕರ್.
ಡಾ.ವೈಭವ್ ಯಾದವ್,ಡಾ.ವೀಣಾ ಮಾಧವನ್ ಪ್ರಾತ್ಯಕ್ಷಿಕೆ ಯೊಂದಿಗೆ ತರಬೇತಿ ನೀಡಿದರು.