ಉಜಿರೆ: ಶ್ರೀ ಕ್ಷೇತ್ರ ರ‍್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಜನವರಿ ತಿಂಗಳಿನಲ್ಲಿ ರಾಜ್ಯದೆಲ್ಲೆಡೆ ಶುದ್ಧಜಲ ಅಭಿಯಾನ ಕರ‍್ಯಕ್ರಮ ಆಯೋಜಿಸಿದ್ದು, ಒಂದು ಲಕ್ಷ ಜನರಿಗೆ ಶುದ್ಧ ಜಲ ಬಳಕೆ ಬಗ್ಯೆ ಅರಿವು, ಜಾಗೃತಿ ಮೂಡಿಸಲಾಗುತ್ತದೆ ಎಂದು ಗ್ರಾಮಾಭಿವೃದ್ಧಿ ಯೋಜನೆಯ ಕರ‍್ಯನರ‍್ವಾಕ ನರ‍್ದೇಶಕ ಡಾ. ಎಲ್.ಎಚ್. ಮಂಜುನಾಥ್ ಮಂಗಳವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಶೇ. 60 ರಷ್ಟು ಪ್ರದೇಶಗಳಲ್ಲಿ ಕುಡಿಯುವ ನೀರಿನಲ್ಲಿ ಅಗತ್ಯ ಪ್ರಮಾಣಕ್ಕಿಂತ ಹೆಚ್ಚು ಪ್ಲೋರೈಡ್, ಶೇ. 20 ರಷ್ಟು ಅಧಿಕ ನೈಟ್ರೇಟ್ ಹಾಗೂ ಶೇ. 30 ರಷ್ಟು ಸೂಕ್ಷಾ್ಮಣುಗಳಿಂದ ನೀರು ಕಲುಷಿತವಾಗಿ ಜನರು ರೋಗಗಳಿಗೆ ಬಲಿಯಾಗುತ್ತಾರೆ. ಬೆಳಗಾವಿ, ಬೀದರ್, ಚಿತ್ರದರ‍್ಗ, ದಾವಣಗೆರೆ, ಹಾಸನ , ಗದಗ, ಕೋಲಾರ ಮೊದಲಾದ ಕಡೆಗಳಲ್ಲಿ ಪ್ಲೋರೈಡ್ ಸಮಸ್ಯೆ ಅಧಿಕವಾಗಿ ಕಂಡು ಬಂದಿದೆ.

ರಾಜ್ಯದಲ್ಲಿ ಪ್ರಥಮವಾಗಿ 2009ರಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಯಗಟಿಯಲ್ಲಿ ಮೊದಲ ಶುದ್ಧ ಕುಡಿಯುವನೀರಿನ ಘಟಕವನ್ನು ರ‍್ಮಸ್ಥಳದ ವತಿಯಿಂದ ಪ್ರಾರಂಭಿಸಲಾಗಿದೆ.

“ಶುದ್ಧಾಗಂಗಾ” ಹೆಸರಿನಲ್ಲಿ ರಾಜ್ಯದಲ್ಲಿ 371 ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಪ್ರಾರಂಭಿಸಿದ್ದು, ಪ್ರತಿ ದಿನ 3,36,000 ಮಂದಿ ಶುದ್ಧ ನೀರನ್ನು ಬಳಸುತ್ತಿದ್ದಾರೆ. ಇದಕ್ಕಾಗಿ ಪ್ರತಿ ದಿನ 17 ಲಕ್ಷ ಲೀಟರ್ ಶುದ್ಧ ಕುಡಿಯುವ ನೀರನ್ನು ಈ ಘಟಕಗಳ ಮೂಲಕ ನೀಡಲಾಗುತ್ತದೆ.

ಶುದ್ಧ ಜಲಜಾಗೃತಿ ಅಭಿಯಾನದಲ್ಲಿ ಶಾಲಾ ಮಕ್ಕಳಿಗೆ ಮಾಹಿತಿ, ಜಾಥಾ ಕರ‍್ಯಕ್ರಮ, ಕರಪತ್ರ ಹಂಚಿಕೆ, ಬೀದಿನಾಟಕ, ಸರ‍್ವಜನಿಕರಿಗೆ ಮಾಹಿತಿ ನೀಡುವುದು, ಮನೆಗಳಿಗೆ ಭೇಟಿ ನೀಡಿ ಮರ‍್ಗರ‍್ಶನ ಮೊದಲಾದ 400ಕ್ಕೂ ಮಿಕ್ಕಿ ವಿವಿಧ ಕರ‍್ಯಕ್ರಮಗಳ ಮೂಲಕ ಶುದ್ಧಜಲ ಬಳಕೆ ಬಗ್ಯೆ ಅರಿವು, ಜಾಗೃತಿ ಮೂಡಿಸಲಾಗುವುದು.