ಉಡುಪಿ, ಮಾರ್ಚ್ 10: ಕಾರ್ಮಿಕ ಇಲಾಖೆ ವತಿಯಿಂದ ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ ಯೋಜನೆಯ ಪಿಂಚಣಿ ಸಪ್ತಾಹ ಕಾರ್ಯಕ್ರಮದ ಕುರಿತು ಸ್ವಸ್ತಿಕ್ ಪ್ರೊಡಕ್ಷನ್ ಮುದ್ರಾಡಿ ಸುರೇಂದ್ರ ಮೋಹನ್ ಹಾಗೂ ತಂಡದ ವತಿಯಿಂದ, ಮಂಗಳವಾರ ನಗರದ ಶಿರಿಬೀಡು ನರ್ಮ್ಬ ಸ್ಸ್ಟ್ಯಾಂಡ್  ಬಳಿ ಬೀದಿ ನಾಟಕದ ಮೂಲಕ ಅಸಂಘಟಿತ ಕಾರ್ಮಿಕರಲ್ಲಿ ಅರಿವು ಮೂಡಿಸಲಾಯಿತು.

    ಕಾರ್ಯಕ್ರಮದಲ್ಲಿ ಕಾರ್ಮಿಕ ಅಧಿಕಾರಿ ಕುಮಾರ್ ಮಾತನಾಡಿ, 75 ನೇ ಅಮೃತ ಮಹೋತ್ಸವದ ಅಂಗವಾಗಿ ಪಿಂಚಣಿ ಸಪ್ತಾಹ ಮತ್ತು ನೋಂದಣಿ ಶಿಬಿರವನ್ನು ಜಿಲ್ಲೆಯಲ್ಲಿ ಮಾರ್ಚ್ 7 ರಿಂದ 13 ರ ವರೆಗೆ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. 18 ರಿಂದ 40 ವರ್ಷದೊಳಗಿನ, ಆದಾಯ ತೆರಿಗೆ, ಇ.ಎಸ್.ಐ, ಪಿ.ಎಫ್, ಎನ್.ಪಿ.ಎಸ್ ಯೋಜನೆಯ ವ್ಯಾಪ್ತಿಗೆ ಒಳಪಡದ ಅಸಂಘಟಿತ ಕಾರ್ಮಿಕರು ಅರ್ಹರಾಗಿತ್ತಾರೆ ಹಾಗೂ 18 ವರ್ಷದ ಕಾರ್ಮಿಕರು 55 ರೂ. ಹಾಗೂ 40 ವರ್ಷದ ಕಾರ್ಮಿಕರು 200 ರೂ. ವಂತಿಕೆಯನ್ನು ಪ್ರತಿ ತಿಂಗಳು ಪಾವತಿಸುವ ವಂತಿಕೆಯ ಸಮಾನಂತರವಾಗಿ ಕೇಂದ್ರ ಸರ್ಕಾರವು ಪಾವತಿಸುತ್ತದೆ. ಫಲಾನುಭವಿಯು 60 ವರ್ಷ ಪೂರ್ಣಗೊಂಡ ನಂತರ ತಿಂಗಳಿಗೆ 3000 ರೂ. ಗಳ ಪಿಂಚಣಿ ಪಡೆಯಲು ಅರ್ಹರಾಗುತ್ತಾರೆ ಎಂದು ಯೋಜನೆಯ ಮಹತ್ವ ತಿಳಿಸಿದರು.

    ಈ ಸಂದರ್ಭದಲ್ಲಿ ಕಾರ್ಮಿಕ ನಿರೀಕ್ಷಕ ಪ್ರವೀಣ್ ಕುಮಾರ್, ವಲಸೆ ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಸಂಗಪ್ಪ ಹಾಗೂ ಕಾರ್ಮಿಕ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.